Flash News
Monday, August 31, 2026
Logo Flash News
Monday, August 31, 2026
Logo
ಅಡ್ಲೂರು ಬಳಿ ಬಸ್ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ: ಇಬ್ಬರ ಸಾವು

ಅಡ್ಲೂರು ಬಳಿ ಬಸ್ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ: ಇಬ್ಬರ ಸಾವು

September 18, 2025   |   Flash News

ಅಂಕೋಲಾ: ತಾಲ್ಲೂಕಿನ ಅಡ್ಲೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ದುರ್ಘಟನೆ ಗುರುವಾರ ಸಂಜೆ ಸಂಭವಿಸಿದೆ. 

ಘಟನೆಯಲ್ಲಿ ಟ್ಯಾಂಕರ್ ಚಾಲಕ ಮತ್ತು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೇಣಿ ಮೂಲದ ಭಾಸ್ಕರ ಗಾಂವಕರ  ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ತಾಲ್ಲೂಕು ಕೇಂದ್ರದಿಂದ ಗ್ರಾಮೀಣ ಪ್ರದೇಶವಾದ ಮಕ್ಕಿಗದ್ದೆಯಿಂದ ಬಸ್ ತೆರಳುತ್ತಿತ್ತು. ಈ ವೇಳೆ ಅತಿ ವೇಗದಿಂದ ಬಂದ ಟ್ಯಾಂಕರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿದೆ. ಪೊಲೀಸರು ಕೆಎಸ್ಆರ್ಟಿಸಿ ಅಧಿಕಾರಿಗಳು ಮತ್ತು ಸಂಬಂಧಿತ ಇಲಾಖೆಯವರು ಸ್ಥಳಕ್ಕೆ ತೆರಳಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.