Flash News
Monday, August 31, 2026
Logo Flash News
Monday, August 31, 2026
Logo
ಅರಣ್ಯ ವೀಕ್ಷಕನ ಹಂತಕರಿಗೆ ಜೀವಾವಧಿ ಶಿಕ್ಷೆ

ಅರಣ್ಯ ವೀಕ್ಷಕನ ಹಂತಕರಿಗೆ ಜೀವಾವಧಿ ಶಿಕ್ಷೆ

November 21, 2025   |   Flash News


ಶಿರಸಿ: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಮೂವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ,ತಲಾ 20 ಸಾವಿರ ರೂ. ದಂಡ ಹಾಗೂ ಸಂತ್ರಸ್ತರಿಗೆ ಮೂವರು ಕೊಲೆಪಾತಕರಿಂದ ಒಟ್ಟೂ 75 ಸಾವಿರ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ಈ ಸಂಬಂಧ ಶುಕ್ರವಾರ ಶಿರಸಿ ನಗರದ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಕಿರಣ ಕಿಣಿ ಮಹತ್ವದ ತೀರ್ಪು ಆದೇಶ ನೀಡಿದರು. ಸಹದೇವ ಹನುಮಂತ ದಡ್ಡಿಕರ್,ಸದಾನಂದ ಅನಂತ ಪಾಟೀಲ್ ಹಾಗು ರಾಮಾ ಮಾರಿತಿ ಹಬ್ಬಳಕರ್ ಕೊಲೆಗೈದ ಆರೋಪಿಗಳು. ಜಮೀನು ವ್ಯಾಜ್ಯಕ್ಕೆ ಸಂಬಂದಪಟ್ಟ ವಿಷಯದಲ್ಲಿ ಮೂವರು ಆರೋಪಿಗಳು ಸೇರಿ ಅರಣ್ಯ ವೀಕ್ಷಕರಾಗಿದ್ದ ಪರಶುರಾಮನನ್ನು ಕೊಲೆಮಾಡಿದ್ದರು. ಹಳಿಯಾಳ ತಾಲೂಕಿನ ಕರ್ಲಕಟ್ಟಾದಲ್ಲಿ ನಡೆದಿದ್ದ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಸಮರ್ಥವಾಗಿ ಮಂಡಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮಾಡುವಲ್ಲಿ ಪಬ್ಲಿಕ್ ಪ್ರೊಸಿಕ್ಯೂಟರ್ ರಾಜೇಶ ಎಂ ಮಳಗಿಕರ್ ಯಶಸ್ವಿಯಾದರು

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.