Flash News
Monday, August 31, 2026
Logo Flash News
Monday, August 31, 2026
Logo
ದಿನಕರ ಪ್ರತಿಷ್ಠಾನದ ಪದಾಧಿಕಾರಿಗಳ ಆಯ್ಕೆ.  ಅಧ್ಯಕ್ಷರಾಗಿ ರಾಮಕೃಷ್ಣ ಗುಂದಿ

ದಿನಕರ ಪ್ರತಿಷ್ಠಾನದ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ರಾಮಕೃಷ್ಣ ಗುಂದಿ

December 27, 2025   |   Flash News

ಅಂಕೋಲಾ: ಅಂಕೋಲೆಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯೆಂದು ಹೆಸರಾದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನದ ನೂತನ ಪದಾಧಿಕಾರಿಗಳ ಆಯ್ಕೆ ಜರುಗಿದೆ. ಪಿ.ಎಂ. ಹೈಸ್ಕೂಲ್ ರೈತ ಭವನದಲ್ಲಿ ನಡೆದ ವಿಶೇಷ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ರಾಮಕೃಷ್ಣ ಗುಂದಿ, ಕಾರ್ಯದರ್ಶಿಯಾಗಿ ಶಿಕ್ಷಕ ಜಗದೀಶ ನಾಯಕ ಹೊಸ್ಕೇರಿ, ಗೌರವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಅಮ್ಮೆಂಬಳ ಆನಂದ, ಶಾಂತಾರಾಮ ನಾಯಕ ಹಿಚ್ಕಡ, ಉಪಾಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್ ಅಂಕೋಲಾ ಅಧ್ಯಕ್ಷ ಗೋಪಾಲಕೃಷ್ಣ ನಾಯಕ(ಕಾಂತ ಮಾಸ್ತರ್) ಪ್ರಾಚಾರ್ಯ ಡಾ. ಎಸ್.ವಿ. ವಸ್ತ್ರದ, ವಿದ್ಯಾ ಆರ್. ನಾಯ್ಕ, ಖಜಾಂಚಿಯಾಗಿ ಮಹಾಂತೇಶ ರೇವಡಿ, ಸಹಕಾರ್ಯದರ್ಶಿಯಾಗಿ ಜಯಶೀಲ ಆಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರೊ. ಮೋಹನ ಹಬ್ಬು ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಭೆಯಲ್ಲಿ ನೂತನ ಕಾರ್ಯಕಾರಿ ಸದಸ್ಯರಾಗಿ ರಾಮಾ ನಾಯ್ಕ, ರವೀಂದ್ರ ಕೇಣಿ, ಜೇ. ಪ್ರೇಮಾನಂದ, ನಾಗೇಂದ್ರ ನಾಯಕ ತೊರ್ಕೆ, ಫಾಲ್ಗುಣ ಗೌಡ, ಅನಂತ ನಾಯ್ಕ, ದತ್ತಾ ನಾಯ್ಕ, ಸಾವಿತ್ರಿ ನಾಯ್ಕ, ಆಮಂತ್ರಿಕರಾಗಿ ಹೊನ್ನಮ್ಮ ನಾಯಕ, ಪ್ರಭಾ ಹಬ್ಬು, ಪ್ರಭಾಕರ ಬಂಟ, ವೆಂಕಟೇಶ ಗಜಾನನ ಕಾಕರಮಠ ಆಯ್ಕೆಯಾಗಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.