Flash News
Monday, August 31, 2026
Logo Flash News
Monday, August 31, 2026
Logo

ಕರಾವಳಿ ಉತ್ಸವದ ವೇದಿಕೆಯಲ್ಲಿಂದು ಡಿಕೆಶಿ: ಸಮಾರೋಪದ ವೇದಿಕೆಯಲ್ಲಿ ದಲೇರ್ ಮೆಹಂದಿ ಮೋಡಿ

December 28, 2025   |   Flash News

ಕಾರವಾರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಇಂದು  ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸಂಜೆ 4.50ಕ್ಕೆ ದಾಬೋಲಿಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮೂಲಕ ಪ್ರಯಾಣಿಸಿ ಸಂಜೆ 6.30ಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ತಲುಪಲಿದ್ದಾರೆ. ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ನಡೆಯುವ “ಕರಾವಳಿ ಉತ್ಸವ” ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.ಉಪಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ಭದ್ರತೆ, ಸ್ವಾಗತ ಮತ್ತು ಸಾರಿಗೆ ವ್ಯವಸ್ಥೆಗಳನ್ನು ಸಂಬಂಧಿಸಿದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಂಡಿವೆ. ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ ಕಳೆದ ಒಂದು ವಾರದಿಂದ ಕರಾವಳಿ ಉತ್ಸವ ಅದ್ದೂರಿಯಾಗಿ ನಡೆಯುತ್ತಿದ್ದು, ಪ್ರಖ್ಯಾತ ತಾರಾಗಣ ವೇದಿಕೆಯಲ್ಲಿ ಮಿಂಚಿದ್ದು ಈ ದಿನ ಖ್ಯಾತ ಸಿಂಗರ್ ದಲೇರ್ ಮೆಂಹದಿ ಕರಾವಳಿಗರಿಗೆ ರಸದೌತಣ ನೀಡಲಿದ್ದಾರೆ. ಅದೇ ದಿನ ಡಿಸಿಎಂ ಡಿಕೆಶಿ ಆಗಮನ ಸಮಾರೋಪ ಸಮಾರಂಭದ ಕಳೆ ಹೆಚ್ಚಿಸಲಿದ್ದು, ಒಂದೊಮ್ಮೆ ಡಿಕೆಶಿ ಅವರು ಇಲ್ಲಿಯೇ ವಾಸ್ತವ್ಯ ಮಾಡಿದರೆ, ಅಂಕೋಲಾ ತಾಲೂಕಿನ ಮಂಜಗುಣಿ -ಗಂಗಾವಳಿ ಸೇತುವೆ ಉದ್ಘಾಟಿಸಬಹುದೇ ಎಂದು ಹಲವರು ಕಾತುರದಿಂದ ಕಾಯುವಂತಾಗಿದೆ.

 

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.