ಕಾರವಾರ: ಜಿಲ್ಲೆಯ ಬಹುದಶಕಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಬಹುದೇ ಈಡೇರಬಹುದೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟಿಪ್ಪಣಿಯೊಂದು ಹೊಸ ಭರವಸೆ ಹುಟ್ಟು ಹಾಕಿದೆ.
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ಕಣಿವೆಯ ಹಳ್ಳಿಗಳು, ಪರ್ವತದ ಅಂಚಿನಲ್ಲಿ ನೆಲೆಗೊಂಡಿರುವ ಜನಸಮುದಾಯಗಳು ಹಾಗೂ ಸುತ್ತಮುತ್ತಲಿನ ಗ್ರಾಮೀಣ ನಿವಾಸಿಗಳ ಅನುಕೂಲಕ್ಕಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಿಕೊಡುವಂತೆ ಕೋರಿದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದಕ್ಕೆ ತಕ್ಕಂತೆ ಅಗತ್ಯ ಕ್ರಮಗಳು ಜರುಗಿದರೆ ಈ ಬಾರಿಯ ಮುಂಗಡಪತ್ರದಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ನಿರೀಕ್ಷಿಸಬಹುದು.