ಕಾರವಾರ:ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿದ ಬಾಲಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಗಾಂವಗೇರಿಯ ಯಶ್ ಶ್ಯಾಮ ಮಹಾಲೆ (17)ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕ. ಶಿವರಾತ್ರಿ ಹಿನ್ನೆಲೆ ಮಾಜಾಳಿ ಬಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರಿದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು ಸಮುದ್ರ ಸ್ನಾನ ಮಾಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಸಮುದ್ರಕ್ಕೆ ಸ್ನಾನಕ್ಕೆಂದು ಆಗಮಿಸುತ್ತಾರೆ. ಈ ವೇಳೆ ಸ್ನಾನಕ್ಕಾಗಿ ಸಮುದ್ರಕ್ಕೆ ಇಳಿದ ಬಾಲ ಮುಳುಗಿ ಮೃತಪಟ್ಟಿದ್ದಾರೆ. ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.