ಕಾರವಾರ: ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಪಟ್ಟಣದ ಖಾಸಗಿ ಹೋಟೆಲ್ ಒಂದರಲ್ಲಿ ಮಂಗಳವಾರ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಬ್ಯಾನರ್ ನಲ್ಲಿ ಸ್ಥಳೀಯ ಶಾಸಕ ಸತೀಶ್ ಸೈಲ್ ಫೋಟೋ ಇಲ್ಲದಿರುವುದು ಅವರ ಅಭಿಮಾನಿಗಳನ್ನು ಕೆರಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಭಾವಚಿತ್ರವನ್ನು ಬ್ಯಾನರ್ ನಲ್ಲಿ ಪ್ರಕಟಿಸಲಾಗಿದ್ದು ಪಟ್ಟಣದ ಹಲವು ಕಡೆಗಳಲ್ಲಿ ಬ್ಯಾನರ್ ತೂಗು ಹಾಕಲಾಗಿದೆ. ಆದರೆ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದು, ಸರಿಯಲ್ಲ ಎಂದು ಅವರ ಅಭಿಮಾನಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.