Flash News
Tuesday, September 01, 2026
Logo Flash News
Tuesday, September 01, 2026
Logo

ಹೊಸ್ತೋಟದಲ್ಲಿ ಹೆಂಡದಂಗಡಿ ಬೇಡ; ಮಹಿಳೆಯರ ಮನವಿ

August 09, 2025   |   Flash News

ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸ್ತೋಟದಲ್ಲಿ ಮದ್ಯದ ಅಂಗಡಿ ತೆರೆಯಲು ಪರವಾನಿಗೆ ನೀಡಬಾರದಾಗಿ ಸ್ಥಳೀಯ ಮಹಿಳೆಯರು ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. 

ಹೆಗ್ಗರಣಿ ಹೊಸ್ತೋಟದಲ್ಲಿ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಇದ್ದೇವೆ. ಇಲ್ಲಿ ವಿದ್ಯಾರ್ಥಿ ನಿಲಯ, ದೇವಸ್ಥಾನಗಳಿದ್ದು ನಿಗದಿತ ಅಂತರಕ್ಕಿಂತ ಸಮೀಪದಲ್ಲಿ ರಾಜ್ಯ ಹೆದ್ದಾರಿ ಹಾದು ಹೋಗಿದೆ. ಇತ್ತೀಚಿಗೆ ಈ ಪ್ರದೇಶದಲ್ಲಿ ಮದ್ಯದ ಅಂಗಡಿ ತೆರೆಯುವ ತಯಾರಿ ನಡೆಯುತ್ತಿದ್ದು ಅದನ್ನು ಹಲವು ಬಾರಿ ವಿರೋಧಿಸಿದ್ದೇವೆ. ನಮ್ಮ ವಿರೋಧದ ನಡುವೆ ಕೂಡ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮದ್ಯದ ಅಂಗಡಿ ತೆರೆಯದೆ ಬಿಡುವುದಿಲ್ಲ ಎಂದು ಸವಾಲು ಹಾಕಿ ಸಮಾಜದ ಸ್ವಾಸ್ತ್ಯ ಹಾಳು ಮಾಡುವದಕ್ಕೆ ಮುಂದಾಗಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಹೆಂಡ ಮಾರುವವರ ಯಾದಿ ಸಹಿತ ಮನವಿ ಮಾಡಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.